ಹೊಸ ದಿಗಂತ ಡಿಜಿಟಲ್ ಡೆಸ್ಕ್
ಭಾರತ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿದೆ. ಈಗಾಗಲೆ 2-0ಯಲ್ಲಿ ಸರಣಿ ತನ್ನದಾಗಿಸಿಕೊಂಡಿರುವ ಭಾರತ ತಂಡದಲ್ಲಿ ನಾಲ್ವರು ಆಟಗಾರರನ್ನು ಬದಲಾವಣೆ ಮಾಡಲಾಗಿದೆ.
ಕುಲ್ದೀಪ್ ಯಾದವ್, ರವಿ ಬಿಸ್ಣೋಯ್, ಆವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್ ಈ ಪಂದ್ಯದಲ್ಲಿ ತಂಡ ಸೇರಿಕೊಂಡರೆ, ಬುಮ್ರಾ, ಭುವನೇಶ್ವರ್ ಕುಮಾರ್, ಚಹಲ್ ಮತ್ತು ಇಶಾನ್ ಕಿಶನ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಆರು ಓವರ್ ಮುಗಿದಾಗ ಶ್ರೀಲಂಕಾ 3 ವಿಕೆಟ್ ಕೆಳೆದುಕೊಂಡು 22 ರನ್ ಗಳಿಸಿದೆ. ಆವೇಶ್ ಖಾನ್ 2 ಮತ್ತು ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದುಕೊಂಡಿದ್ದಾರೆ.