ಕಾಂಗ್ರೆಸ್‌ ನ ಮೇಕೆದಾಟು ಪಾದಯಾತ್ರೆ ಯಾರ ವಿರುದ್ಧ?: ಸಚಿವ ಗೋವಿಂದ ಕಾರಜೋಳ ಪ್ರಶ್ನೆ

ಹೊಸದಿಗಂತ ವರದಿ, ಬೆಳಗಾವಿ:

ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಪ್ರಕರಣವಿದ್ದು, ಕಾಂಗ್ರೆಸ್ ಪಕ್ಷನವರು ಪಾದಯಾತ್ರೆ ನಡೆಸುತ್ತಿರುವುದು ಯಾರ ವಿರುದ್ಧ ಎನ್ನುವುದು ಸ್ಪಷ್ಟವಾಗಿ ತಿಳಿಯಬೇಕಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನ್ಯಾಯಾಲಯದಲ್ಲಿ ಪ್ರಕರಣವಿರುವಾಗ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿರುವುದು ಎಷ್ಟು ಸರಿಯಾಗಿದೆ ಎಂದು ಪ್ರಶ್ನಿಸಿದ ಅವರು ಪ್ರಚಾರಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ನೆಪವೊಡ್ಡಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
2013 ರಿಂದ ಕಾಂಗ್ರೆಸ್ ‌ನಡಿಗೆ ಕೃಷ್ಣೆಯ ಕಡೆಗೆ ಎಂದು ಹೇಳಿದ್ದ ವಿಪಕ್ಷ ‌ನಾಯಕ ಸಿದ್ದರಾಮಯ್ಯ
ಅವರ ಅಧಿಕಾರದಲ್ಲಿ ಮಾಡಿದ್ದು ಏನು ? ಎಂದು ಪ್ರಶ್ನಿಸಿದ ಅವರು, ಅಂದು ಸಿದ್ದರಾಮಯ್ಯ ಆಣೆ ಮಾಡಿ ಪ್ರತಿ ವರ್ಷ 10 ಸಾವಿರ ಕೋಟಿ‌ ಖರ್ಚು ಮಾಡುತ್ತೇನೆ ಎಂದು ಸುಳ್ಳು ಹೇಳಿದರು. ಈಗ ಪಾದಯಾತ್ರೆ ಮಾಡುವುದು ಎಷ್ಟು ಸರಿ ಎಂದರು.
133 ಟಿಎಂಸಿ ನೀರು. ನ್ಯಾಯಾಧೀಕರಣದಲ್ಲಿ ನಮಗೆ ಸಿಕ್ಕಿದ್ದು, 2011-12 ರಲ್ಲಿ ನಮ್ಮ ಸರಕಾರದಲ್ಲಿ ನೀರಾವರಿ ಯೋಜನೆಗೆ ಮಂಜೂರಾತಿ ನೀಡಿದೇವು. ಆದರೆ ಬಳಿಕ ಬಂದ ಕಾಂಗ್ರೆಸ್ ಸರಕಾರ ಏನೂ ಮಾಡಲಿಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!