ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಪಡೆಯ ದಾಳಿಗೆ ಮೃತರಾದ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ ಪ್ರಧಾನಿ ಮೋದಿ ಸಾಂತ್ವನ ಹೇಳಿದ್ದಾರೆ.
ಉಕ್ರೇನ್ ನ ಖಾರ್ಕೀವ್ ನಲ್ಲಿನ ಸೂಪರ್ ಮಾರ್ಕೆಟ್ ಬಳಿಯಲ್ಲಿ ಬೆಳಿಗ್ಗೆ ತಿಂಡಿ ತರೋದಕ್ಕೆ ತೆರಳಿದ್ದಂತ ಕರ್ನಾಟಕದ ಹಾವೇರಿಯ ನವೀನ್, ರಷ್ಯಾ ಸೇನೆಯಿಂದ ನಡೆಸಿದ ಶೆಲ್ ದಾಳಿಯಿಂದಾಗಿ ಸಾವನ್ನಪ್ಪಿದ್ದರು.
ನವೀನ್ ಸಾವನ್ನಪ್ಪಿರುವ ವಿಷಯವನ್ನು ಭಾರತೀಯ ವಿದೇಶಾಂಗ ಸಚಿವಾಲಯ ತಿಳಿಸುತ್ತಿದ್ದಂತೆ ಪ್ರಧಾನಿ ಮೋದಿ ದೂರವಾಣಿ ಮೂಲಕ ನವೀನ್ ತಂದೆಗೆ ಕರೆ ಮಾಡಿ ಕೆಲ ನಿಮಿಷಗಳ ಕಾಲ ಮಾತನಾಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ದೇಶವೇ ನಿಮ್ಮೊಂದಿಗಿದೆ, ಮಗನ ಸಾವನ್ನು ಅರಗಿಸಿಕೊಳ್ಳುವಂತ ಶಕ್ತಿಯನ್ನು ಆ ದೇವರು ನೀಡಲಿ. ಭಗವಂತ ನಿಮ್ಮ ಕುಟುಂಬಕ್ಕೆ ಮಗನ ಸಾವಿನ ದುಖ ಭರಿಸುವ ಶಕ್ತಿ ನೀಡಲಿ ಎಂಬುದಾಗಿ ಸಾಂತ್ವಾನ ಹೇಳಿದ್ದಾರೆ.