April 5, 2026
Sunday, April 5, 2026
spot_img

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಮಹಾರಾಷ್ಟ್ರದೊಂದಿಗೆ ಎಂದಿಗೂ ವಿಲೀನವಾಗಲು ಬಿಡಲ್ಲ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಮಹಾರಾಷ್ಟ್ರದೊಂದಿಗೆ ಎಂದಿಗೂ ವಿಲೀನಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ನಡೆದ ಭುವನೇಶ್ವರಿ ಮತ್ತು ಅಣ್ಣಮ್ಮ ದೇವಿಯ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಬೆಳಗಾವಿ ವಿಷಯದಲ್ಲಿ ಬಗ್ಗೆ ಯಾವುದೇ ರಾಜಿ ಇಲ್ಲ. ಮಹಾರಾಷ್ಟ್ರ ಸರ್ಕಾರ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆದರೆ ಮಹಾಜನ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ ಮತ್ತು ಕರ್ನಾಟಕದ ಭಾಗವಾಗಿರುವುದರಿಂದ ನಾವು ಅದನ್ನು ಬಿಡುವುದಿಲ್ಲ ಎಂದರು.

ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಯಿಂದ ಐದು ಶಾಸಕರು ಆಯ್ಕೆಯಾಗಿದ್ದರು. ಆದರೆ ಈಗ ಅವರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಎಂಇಎಸ್ ಜನರು ಸಹ ಕನ್ನಡಿಗರು. ಅವರಲ್ಲಿ ಯಾರಾದರೂ ರೌಡಿಸಂನಲ್ಲಿ ತೊಡಗಿದರೆ, ನಾವು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದರು.

ಗಡಿ ಪ್ರದೇಶಗಳಲ್ಲಿನ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲವನ್ನೂ ಮಾಡಲು ಸರ್ಕಾರ ಸಿದ್ಧವಾಗಿದೆ ಎಂದು ಅವರು ಕನ್ನಡ ಕಾರ್ಯಕರ್ತರಿಗೆ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !