ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್ ಇಂದು ಸಂಜೆ ನಾಲ್ಕೂವರೆ ಗಂಟೆಗಳ ಸಭೆ ನಡೆಸಿದ್ದು, ಅಂತಿಮವಾಗಿ ಸಭೆಯಲ್ಲಿ ಸೋನಿಯಾ ಗಾಂಧಿಯೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸೋಲಿಗೆ ಕಾರಣಗಳು ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ನಡೆಯಿತು
.ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆ ಸೋಲಿಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಮುಖ್ಯಸ್ಥೆ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿತ್ತು.