September 11, 2026
Friday, September 11, 2026
spot_img

ಶ್ವಾಸಕೋಶ ದುರ್ಬಲ ಇರೋರು ಕೂಡಲೇ ದೆಹಲಿ ಬಿಟ್ಟುಹೋಗಿ: ವಾರ್ನಿಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯುಗುಣಮಟ್ಟವು ಕಳಪೆ ಮಟ್ಟಕ್ಕೆ ಕುಸಿಯುತ್ತದೆ. ಆದರೆ ಈ ಬಾರಿ ಉಸಿರಾಡುವ ಗಾಳಿ ವಿಷವಾಗುತ್ತಿದೆ. ಜನರ ಶ್ವಾಸಕೋಶ, ಹೃದಯ ಹಾಗೂ ಮಿದುಳಿಗೆ ನಿರಂತರ ಹಾನಿಯುಂಟು ಮಾಡುತ್ತಿದೆ. ಹೀಗಾಗಿ ಶ್ವಾಸಕೋಶ ಸಮಸ್ಯೆ ಇರೋರು ಈ ಕೂಡಲೇ ದೆಹಲಿ ಬಿಟ್ಟು ಹೋಗಿ ಎಂದು AIIMS ಮಾಜಿ ನಿರ್ದೇಶಕ ಮತ್ತು ಶ್ವಾಸಕೋಶ ಶಾಸ್ತ್ರಜ್ಞ ಡಾ. ರಂದೀಪ್ ಗುಲೇರಿಯಾ ಎಚ್ಚರಿಸಿದ್ದಾರೆ.

ದೆಹಲಿ ಗುಣಮಟ್ಟವು ಅತ್ಯಂತ ಅಪಾಯ ಮಟ್ಟಕ್ಕೆ ತಲುಪುತ್ತಿದೆ. ಶ್ವಾಸಕೋಶ ದುರ್ಬಲ ಇರೋರು ಸಾಧ್ಯವಾದ್ರೆ ಕೂಡಲೇ ನಗರವನ್ನು ಬಿಟ್ಟು ಹೋಗಿ. ಒಂದು ವೇಳೆ ಇದು ಸಾಧ್ಯವಾಗಗಿದ್ದರೇ ಮಾಸ್ಕ್‌ ಧರಿಸುವುದು, ಮನೆಯಲ್ಲಿದ್ದರೇ ಏರ್‌ ಫಿಲ್ಟರ್‌ ಬಳಸುವುದು ಅಥವಾ ವೈದ್ಯರು ನೀಡಿದ ಸಲಹೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ. 

ಮುಂದುವರಿದು ಮಾತನಾಡಿರುವ ರಂದೀಪ್ ಗುಲೇರಿಯಾ, ದೆಹಲಿಯ ಆಸ್ಪತ್ರೆಗಳಲ್ಲಿ ಉಸಿರಾಟ ಸಂಬಂಧಿತ ಕಾಯಿಲೆಗಳು, ತೀವ್ರ ಕೆಮ್ಮು, ಆಸ್ತಮಾ, ಸಿಒಪಿಡಿ ನಂತಹ ದೀರ್ಘಕಾಲಿಕ ಶ್ವಾಸಕೋಶ ಸಮಸ್ಯೆಗಳಿಂದ ಬಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಲ್ಲಿ ಆತಂಕಕಾರಿ ಬೆಳವಣಿಗೆ ಏನಂದ್ರೆ ಯುವಜನರು ಉಸಿರಾಟ, ಅತಿಯಾದ ಕೆಮ್ಮಿನ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !