ಮೈಸೂರು: ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ದುಷ್ಕರ್ಮಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ರಾಘವೇಂದ್ರ ನಗರದ ನಿವಾಸಿ ಸುರೇಂದ್ರ ಎಂಬುವರಿಗೆ ಸೇರಿದ ಎರಡು ಕಾರುಗಳಿಗೆ ಮಧ್ಯರಾತ್ರಿ ಪೆಟ್ರೋಲ್ ಸುರಿದು ಕಿಡಿಗೇಡಿ ಬೆಂಕಿ ಹಚ್ಚಿದ್ದಾನೆ. ಬೆಂಕಿಗೆ ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ದುಷ್ಕರ್ಮಿಗಳು ನಡೆಸಿದ ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಕಾರಿನ ಮಾಲೀಕ ನೀಡಿದ ದೂರಿನ ನಜರಬಾದ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.