Wednesday, November 5, 2025

ಟೇಕಾಫ್‌ ಆಗೋ ಮುನ್ನವೇ ವಿಮಾನದ ಎಮರ್ಜೆನ್ಸಿ ಬಾಗಿಲು ತೆಗೆಯೋಕೆ ಯತ್ನಿಸಿದವ ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾರಣಾಸಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ಏರ್ ವಿಮಾನದಲ್ಲಿ ಟೇಕ್ ಆಫ್ ಆಗುವ ಮುನ್ನ ವಿಮಾನದ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಬಂಧಿಸಿದ ಘಟನೆ ನಡೆದಿದೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೋಮವಾರ ಸಂಜೆ 6.45 ಕ್ಕೆ ಮುಂಬೈಗೆ ಹೊರಡಬೇಕಿದ್ದ QP 1497 ವಿಮಾನದಲ್ಲಿ ಈ ಘಟನೆ ನಡೆದಿದೆ.

ವಿಮಾನವು ರನ್‌ವೇ ಕಡೆಗೆ ಚಲಿಸುತ್ತಿದ್ದಾಗ, ಜೌನ್‌ಪುರ ಜಿಲ್ಲೆಯ ಗೌರಾ ಬಾದ್‌ಶಾಪುರ ನಿವಾಸಿ ಸುಜಿತ್ ಸಿಂಗ್ ಎಂಬ ಪ್ರಯಾಣಿಕ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದನು ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಜಾಗೃತರಾದ ಕ್ಯಾಬಿನ್ ಸಿಬ್ಬಂದಿ ಪೈಲಟ್‌ಗೆ ಮಾಹಿತಿ ನೀಡಿದರು, ಅವರು ವಾಯು ಸಂಚಾರ ನಿಯಂತ್ರಣ (ಎಟಿಸಿ) ಯನ್ನು ಸಂಪರ್ಕಿಸಿ ವಿಮಾನವನ್ನು ನಿಲ್ಲಿಸಿ, ಭದ್ರತಾ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

error: Content is protected !!