ಹೊಸ ದಿಗಂತ ವರದಿ, ಕಲಬುರಗಿ:
ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಷೋತ್ತಮ, ಶ್ರೀರಾಮ ಆಡಳಿತ ಎಲ್ಲರಿಗೂ ಮಾದರಿ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.
ಅವರು ಕಲಬುರಗಿಯ ಓಂನಗರದಲ್ಲಿ ಕಾಲೋನಿಯ ಯುವ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ರಾಮ ನವಮಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಪ್ರಭು ಶ್ರೀ ರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದ್ದು, ರಾಮನವಮಿ ಸಕಲ ಹಿಂದೂ ಧರ್ಮ ಸಂಜಾತರಿಗೂ ಭಾರತದಲ್ಲಿ ಒಂದು ಜನಪ್ರಿಯ ಧಾರ್ಮಿಕ ಹಬ್ಬವಾಗಿದೆ ಹೇಳಿದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಮಾತನಾಡಿ,ರಾಮ್ ನವಮಿ ಹಬ್ಬದ ದಿನದಂದು ಪ್ರತೀಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನ ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕ ಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ. ವಸುದೈವ ಕುಟುಂಬಕಂ ಅಂದರೆ ಇಡೀ ವಿಶ್ವವೇ ಒಂದು ಕುಟುಂಬ ಎಂಬುದನ್ನು ಜಗತ್ತಿಗೆ ಸಾರಿ ಹೇಳಲು ಇಂತಹ ಹಬ್ಬಗಳು ಮಹತ್ವಪೂರ್ಣವಾಗಿವೆ ಎಂದರು.
ಮಹಾನಗರ ಪಾಲಿಕೆ ಸದಸ್ಯ ಈರಣ್ಣ ಹೊನ್ನಳ್ಳಿ ಬೈಕ ರಾಲಿಗೆ ಚಾಲನೆ ನೀಡಿದರು.
ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಮದನ ಯಾಗಾಪುರ, ನಗರ ಬಿಜೆಪಿ ಮುಖಂಡ ಅಮಿತ್ ಚಿಡಗುಂಪಿ, ಯುವ ಮಂಡಳಿಯ ವೆಂಕಟೇಶ ಸುರಪುರ, ಸುಭಮ್ ತಿವಾರಿ, ಶಿವು ಪೂಜಾರಿ, ಕಿರಣ್ ಸೇರಿದಂತೆ ನೂರಾರು ಯುವಕರ ಉಪಸ್ಥಿತರಿದ್ದರು.