ಹೊಸದಿಗಂತ ಡಿಜಟಲ್ ಡೆಸ್ಕ್
ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಗಾಳದ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರು ಬೇಟೆಗಾರರನ್ನು ಮಹಾರಾಷ್ಟ್ರ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್ಗೆ ನುಗ್ಗಿ ಹೇಯ ಕೃತ್ಯ ಎಸಗಿದ್ದಾರೆ ಎಎನ್ನಲಾಗಿದೆ.
ಸಾಂಗ್ಲಿ ಅರಣ್ಯದಲ್ಲಿ ನಿಯೋಜನೆಗೊಂಡಿರುವ ಅರಣ್ಯಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಮಾಹಿತಿಗಳ ಪ್ರಕಾರ, ಮೂವರು ಆರೋಪಿಗಳು ಕೊಂಕಣದಿಂದ ಕೊಲ್ಲಾಪುರ ಚಂದೋಳಿ ಗ್ರಾಮಕ್ಕೆ ಬೇಟೆಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಅರಣ್ಯ ಇಲಾಖೆ ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಘಟನೆಯ ಬಗ್ಗೆ ತಿಳಿದು ಬಂದಿದೆ. ಆರೋಪಿಗಳು ಮಾನಿಟರ್ ಹಲ್ಲಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯದ ದಾಖಲೆಯನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಬೆಂಗಾಲಿ ಮಾನಿಟರ್ ಹಲ್ಲಿ ಜಾತಿಗೆ ಸೇರಿದೆ.