ಚಿಪ್ಪು ಹಂದಿಗಳ ಮಾರಾಟಕ್ಕೆ ಯತ್ನ : ನಾಲ್ವರ ಬಂಧನ

ಹೊಸದಿಗಂತ ವರದಿ ಮಡಿಕೇರಿ:

ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ರಾಜೇಶ್, ಕರಿಯ, ಸೂರ್ಯ, ಕೃಷ್ಣ ಬಂಧಿತ ಆರೋಪಿಗಳು. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ, ಅಕ್ರಮವಾಗಿ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರೆನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಐಡಿ ಪೊಲೀಸ್ ಅರಣ್ಯ ಘಟಕ ಸಿಬ್ಬಂದಿ ಚಿಪ್ಪುಹಂದಿ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ನಿರ್ದೇಶನದಲ್ಲಿ ಮಡಿಕೇರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ಸಂಚಾರಿ ದಳದ ಪಿಎಸ್‍ಐ ಸಿ.ಯು.ಸವಿ, ಹೆಡ್‍ಕಾನ್ಸ್ಟೇಬಲ್ಸ್ ಶೇಖರ್, ರಾಜೇಶ್, ಯೋಗೇಶ್, ಮೋಹನ್ ಮತ್ತು ಕಾನ್ಸ್‌ಟೇಬಲ್ಸ್ ಸ್ವಾಮಿ, ಮಂಜುನಾಥ್ ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!