ಪಂಜಾಬಿ ಗಾಯಕ ಸಿಧು ಹತ್ಯೆ ಪ್ರಕರಣ: ಶಂಕಿತ ಐವರು ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿಯನ್ನು ಉತ್ತರಾಖಂಡದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಂಕಿತನು ಪರ್ವತಗಳಲ್ಲಿ ಹೇಮಕುಂಡ್ ಸಾಹಿಬ್ ಯಾತ್ರೆಯ ಭಾಗವಾಗಿರುವ ಯಾತ್ರಾರ್ಥಿಗಳ ನಡುವೆ ಅಡಗಿಕೊಂಡಿದ್ದನು. ಪಂಜಾಬ್ ಮತ್ತು ಉತ್ತರಾಖಂಡ್ ಜಂಟಿ ಪೊಲೀಸ್ ತಂಡವು ಅವನನ್ನು ಬಂಧಿಸಿದ್ದು, ಪಂಜಾಬ್‌ಗೆ ಕರೆತರಲಾಗುತ್ತಿದೆ ಎಂದು ತಿಳಿದುಬಂದಿದೆ.
ಇಂದು ಡೆಹ್ರಾಡೂನ್‌ನಿಂದ ಬಂಧಿತನಾಗಿರುವ ಶಂಕಿತ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನಾಗಿದ್ದು, ಗಾಯಕನ ಹತ್ಯೆಯ ಹೊಣೆಯನ್ನು ಅವನು ಹೊತ್ತುಕೊಂಡಿದ್ದಾನೆ.
ಉತ್ತರಾಖಂಡದಿಂದ ಇನ್ನೂ ಐವರು ಶಂಕಿತರನ್ನು ಬಂಧಿಸಲಾಗಿದೆ. ಅವರನ್ನೆಲ್ಲ ಪಂಜಾಬ್‌ಗೆ ಕರೆದೊಯ್ಯಲಾಗುತ್ತಿದೆ. ನಿನ್ನೆ ಪಂಜಾಬ್‌ನ ಮಾನ್ಸಾದಲ್ಲಿ ಸಿಧು ಮೂಸ್ ವಾಲಾ ಅವರು ಎಸ್‌ಯುವಿ ಚಲಾಯಿಸುತ್ತಿದ್ದಾಗ ಗುಂಡು ಹಾರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!