ರಾಜ್ಯಸಭೆ ಚುನಾವಣೆ: ಶುರುವಾಗಿದೆ ಕುದುರೆ ವ್ಯಾಪಾರದ ಭೀತಿ, ಬಿಜೆಪಿಯಿಂದ ಉಸ್ತುವಾರಿಗಳ ನೇಮಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಜೂ.10ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಇದೀಗ ಶಾಸಕರ ಕುದುರೆ ವ್ಯಾಪಾರದ ಭೀತಿ ಎದುರಾಗಿದ್ದು, ಹರಿಯಾಣದಲ್ಲಿ ಕಾಂಗ್ರೆಸ್​ ತನ್ನ ಶಾಸಕರನ್ನು ರೆಸಾರ್ಟ್​ಗೆ ಕಳುಹಿಸಲು ಮುಂದಾಗಿದೆ.
ಹರಿಯಾಣದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್​ ಮಕೇನ್​​ ಸ್ಪರ್ಧಿಸಿದ್ದಾರೆ. ಆದರೆ, ಪಕ್ಷವು ರಾಜ್ಯದ ಹೊರಗಿನವರನ್ನು ಕಣಕ್ಕಿಳಿಸಿರುವ ಕಾರಣ ಅತೃಪ್ತಿ ಉಂಟಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಶಾಸಕರ ಕುದುರೆ ವ್ಯಾಪಾರದ ಆತಂಕವೂ ಕಾಂಗ್ರೆಸ್​ಗೆ ಕಾಡುತ್ತಿದೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಯಾ ರಾಜ್ಯಗಳಿಗೆ ತನ್ನ ಉಸ್ತುವಾರಿಗಳನ್ನು ನೇಮಿಸಿದೆ. ಕರ್ನಾಟಕದ ಉಸ್ತುವಾರಿಯಾಗಿ ಕೇಂದ್ರ ಸಚಿವ ಕೆ.ಕಿಶನ್​ ರೆಡ್ಡಿ ಅವರನ್ನು ನೇಮಿಸಲಾಗಿದೆ.ರಾಜಸ್ಥಾನ-ನರೇಂದ್ರ ಸಿಂಗ್​ ತೋಮರ್​, ಹರಿಯಾಣ-ಗಜೇಂದ್ರ ಸಿಂಗ್​ ಶೇಖಾವತ್​ ಹಾಗೂ ಮಹಾರಾಷ್ಟ್ರ ಉಸ್ತುವಾರಿಯಾಗಿ ಅಶ್ವಿನಿ ವೈಷ್ಣವ್​ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!