ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾದಿ ಮೊಹಮದ್ ಕುರಿತು ದ್ವೇಷಪೂರಿತ ಹೇಳಿಕೆಗಳನ್ನು, ಸಂದೇಶಗಳನ್ನು ಹರಡಿದ ಆರೋಪದ ಮೇಲೆ ಬಿಜೆಪಿಯ ಹಲವರ ವಿರುದ್ಧ ದೆಹಲಿ ಪೋಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪಕ್ಷದಿಂದ ಉಚ್ಛಾಟನೆಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ, ನವೀನ್ ಜಿಂದಾಲ್ ಮತ್ತು ಸಾಬಾ ನಖ್ವಿ ಹೆಸರನ್ನು ನಮೂದಿಸಲಾಗಿದೆ.
ಎರಡು ಎಫ್ಐಆರ್ಗಳು ದಾಖಲಾಗಿದ್ದು ಒಂದರಲ್ಲಿ ನೂಪುರ್ ಶರ್ಮಾ ವಿರುದ್ಧ ಪ್ರಕರಣದಾಖಲಾಗಿದ್ದರೆ ಇನ್ನೊಂದರಲ್ಲಿ ನಿರಂತರವಾಗಿ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ ಎಂದು ನವೀನ್ ಜಿಂದಾಲ್, ಶಾದಾಬ್ ಚೌಹಾಣ್, ಸಬ್ ನಖ್ವಿ, ಮೌಲಾನಾ ಮುಫ್ತಿ ನದೀಮ್, ಅಬ್ದುರ್ ರೆಹಮಾನ್, ಗುಲ್ಜಾರ್ ಅನ್ಸಾರಿ ಮತ್ತು ಅನಿಲ್ ಕುಮಾರ್ ಮೀನಾ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.
ವಿವಿಧ ಗುಂಪುಗಳನ್ನು ಪ್ರಚೋದಿಸುವ ಮತ್ತು ದೇಶದಲ್ಲಿ ಸಾರ್ವಜನಿಕ ನೆಮ್ಮದಿಯ ನಿರ್ವಹಣೆಗೆ ಹಾನಿಕಾರಕ ಸನ್ನಿವೇಶಗಳನ್ನು ಸೃಷ್ಟಿಸಲಾಗುತ್ತಿದೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸ್ ವಿಶೇಷ ಸೆಲ್ನ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ (ಐಎಫ್ಎಸ್ಒ) ಘಟಕವು ಎಫ್ಐಆರ್ ದಾಖಲಿಸಿದೆ.