ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಬಗ್ಗೆ ಕೋಡಿಹಳ್ಳಿ ಶ್ರೀಗಳು ಮತ್ತೊಂದು ಭವಿಷ್ಯವನ್ನು ನುಡಿದಿದ್ದಾರೆ. ಇನ್ನು ಒಂದೂವರೆ ವರ್ಷದಲ್ಲಿ ಕೋವಿಡ್-19 ಸಂಪೂರ್ಣ ಮರೆಯಾಗುತ್ತದೆ,. ಆದರೆ, ಹೋಗುವಾಗ ವಿಶೇಷವಾದ ಕಷ್ಟವನ್ನು ಕೊಟ್ಟು ಹೋಗುತ್ತೆ. ಕೋವಿಡ್ ಗಾಳಿಯ ಮೂಲಕವೂ ಬರಬಹುದು. ಉಸಿರಾಟದ ತೊಂದರೆಯಾಗಿ ಪ್ರಾಣ ಹಾನಿಯಾಗಹುದು. ಈ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಶ್ರೀಗಳು, ಮಳೆಯ ಬಗ್ಗೆ ಈ ಹಿಂದೆ ಕೆಂಡಾಮಂಡಲ ಆಗುತ್ತೆ ಎಂದಿದ್ದೆ. ಮಲೆನಾಡು ಬಯಲಾಗುತ್ತೆ, ಬಯಲು ಮಲೆನಾಡಾಗುತ್ತೆ ಎಂದಿದ್ದೆ. ಈಗ ಎಲ್ಲ ಕಡೆ ನೀರು ಕೆಂಡಾಮಂಡಲ ಆಗ್ತಾ ಇದೆ. ಮುಂಗಾರುಮಳೆ ಇನ್ನೂ ಹೆಚ್ಚಾಗುವ ಲಕ್ಷಣ ಇದೆ ಎಂದಿದ್ದಾರೆ.ರಾಜಕೀಯದ ಬಗ್ಗೆಯೂ ಭವಿಷ್ಯ ನುಡಿದಿರುವ ಶ್ರೀಗಳು, ರಾಜಕೀಯ ಅಸ್ಥಿರತೆ ಕಾಡುತ್ತೆ ಅಂತಾ ಮೊದಲೇ ಹೇಳಿದ್ದೆ. ಗುಂಪುಗಳಾಗ್ತವೆ ಅಂದಿದ್ದೆ. ಅದನ್ನು ಈಗ ಕಂಡುಕೊಂಡಿದ್ದೀರ. ದೇಶದಲ್ಲಿ ಅವಘಢ ಆಗುತ್ತೆ ಎಂದಿದ್ದೆ. ಅದು ಈಗ ಪ್ರಾರಂಭವಾಗಿದೆ ಎಂದು ಶ್ರೀಗಳು ಹೇಳಿದರು.