ಶನಿವಾರಸಂತೆ: ಕಸಾಪ ಪದಾಧಿಕಾರಿಗಳ ಪದಗ್ರಹಣ

ಹೊಸದಿಗಂತ ವರದಿ, ಮಡಿಕೇರಿ:
ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷರಾಗಿ ಬಿ.ಬಿ.ನಾಗರಾಜ್, ಗೌರವ ಕಾರ್ಯದರ್ಶಿಗಳಾಗಿ ಎಂ.ಪಿ.ಮೋಹನ್ ‌ಪಿ.ಸಿ ಮತ್ತು ಶಶಿಕಲಾ ನಾಗರಾಜ್, ಕೋಶಾಧಿಕಾರಿಯಾಗಿ ಎಸ್.ಬಿ.ನಂಜಪ್ಪ ಅವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಈ ಸಂದರ್ಭದಲ್ಲಿ ಹೋಬಳಿ ಸಮಿತಿ ವತಿಯಿಂದ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಆ
ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಶನಿವಾರಸಂತೆ ವೃತ್ತ ನಿರೀಕ್ಷಕ ಪರಶಿವಮೂರ್ತಿ, ಸೋಮವಾರಪೇಟೆ ಕಸಾಪ ಅಧ್ಯಕ್ಷ ಎಸ್.ಡಿ ವಿಜೇತ್, ಮುನೀರ್ ಅಹಮದ್ ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!