ದಿಗಂತ ವರದಿ ವಿಜಯಪುರ:
ಲಾರಿ ಹಾಗೂ ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ, ಚಾಲಕ, ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ನಡೆದಿದೆ. ಈ ಅಪಘಾತದಲ್ಲಿ ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಐವರು ವಿದ್ಯಾರ್ಥಿಗಳು ಕೂಡ ಗಾಯಗೊಂಡಿದ್ದಾರೆ.
ಅಪಘಾತ ನಡೆದು ಬಹಳ ಹೊತ್ತಾದರೂ ಸ್ಥಳಕ್ಕೆ ಬಾರದ 108 ಆ್ಯಂಬುಲೇನ್ಸ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಮೇಲೆ ಅರ್ಧ ಗಂಟೆಯಿಂದ ಚಾಲಕ ನರಳಾಡಿದ್ದಾನೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.