ಹೊಸದಿಗಂತ ಡಿಜಿಟಲ್ ಡೆಸ್ಕ್”
‘ಯೋಗ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ವೇಳೆಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದು, ಪಿಎಂ ಮೋದಿಗೆ ವಿಶೇಷ ಉಡುಗೊರೆ ನೀಡಲು ಆಭರಣ ವ್ಯಾಪಾರಿಗಳು ಮುಂದಾಗಿದ್ದಾರೆ.
ನವರತ್ನ ಜ್ಯುವೆಲ್ಲರ್ಸ್ ವತಿಯಿಂದ ಸ್ವರ್ಣಾಕ್ಷರಗಳಲ್ಲಿ ಕೆತ್ತನೆ ಮಾಡಿರುವ ವಿಶೇಷ ಫೋಟೋವನ್ನು ಸಂಸದ ಪ್ರತಾಪ್ ಸಿಂಹ ಮೂಲಕ ಈ ನೆನಪಿನ ಕಾಣಿಕೆ ನೀಡಲಾಗುವುದು. ಮೈಸೂರು ಅರಮನೆ, ಮೋದಿ ಯೋಗದ ಭಂಗಿ ಹಾಗೂ ಪ್ರಧಾನಿ ಭಾವಚಿತ್ರವನ್ನು ಬಂಗಾರದಿಂದ ಕೆತ್ತನೆ ಮಾಡಲಾಗಿದೆ.
ಬಂಗಾರ ಲೇಪಿತ ಕೆತ್ತನೆಯ ಚಿತ್ರಪಟದಲ್ಲಿ ಯೋಗದ ಶ್ಲೋಕವನ್ನ ಅಳವಡಿಕೆ ಮಾಡಲಾಗಿದೆ. ಥಾಯ್ಲೆಂಡ್ನಲ್ಲಿ ಮಾಡಿಸಲಾಗಿರುವ ವಿಶೇಷ ಗಿಫ್ಟ್ ಇದಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ