ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಒಡಿಶಾದ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ದ್ರೌಪದಿ ಮುರ್ಮುಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬೆಂಬಲ ಸೂಚಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ನವೀನ್ ಪಾಟ್ನಾಯಕ್ ʻದೇಶದ ಅತ್ಯುನ್ನತ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ದ್ರೌಪದಿ ಮುರ್ಮು ಅವರಿಗೆ ನನ್ನ ಅಭಿನಂದನೆಗಳು. ಗೌರವಾನ್ವಿತ ಪ್ರಧಾನಿಯಾದ ನರೇಂದ್ರ ಮೋದಿ ಅವರು ನನ್ನೊಂದಿಗೆ ಈ ವಿಚಾರ ಚರ್ಚಿಸಿದ್ದು ನನಗೆ ಬಹಳ ಸಂತೋಷವಾಯಿತು, ಒಡಿಶಾದ ಜನರಿಗೆ ಇದು ನಿಜಕ್ಕೂ ಹೆಮ್ಮೆಯ ಕ್ಷಣʼವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
Congratulations Smt #DraupadiMurmu on being announced as candidate of NDA for the country’s highest office. I was delighted when Hon’ble PM @narendramodi ji discussed this with me. It is indeed a proud moment for people of #Odisha.
— Naveen Patnaik (@Naveen_Odisha) June 21, 2022