ಕೌರವ, ಪಾಂಡವರು ಯಾರು ಕೇಳಿದ್ದ ವರ್ಮ ವಿರುದ್ಧ ದಾಖಲಾಯಿತು ದೂರು!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಎನ್ ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಗ್ಗೆ ವಿವಾದಿತ ಟ್ವೀಟ್ ಮಾಡಿದ್ದ  ಬಹುಭಾಷಾ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮ ವಿರುದ್ಧ ದೂರು ದಾಖಲಾಗಿದೆ.
ದ್ರೌಪದಿಯವರು ರಾಷ್ಟ್ರಪತಿಯಾದರೆ ಕೌರವರು, ಪಾಂಡವರು ಯಾರು ಎಂದು ವರ್ವ ಪ್ರಶ್ನಿಸಿದ್ದರು. ಈ ಟ್ವೀಟ್‌ಗೆ ವ್ಯಾಪಕ ಆಕ್ಷೇಪ, ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಬಿಜೆಪಿ ನಾಯಕ,  ಗುಡೂರು ನಾರಾಯಣ ರೆಡ್ಡಿ, ಟಿ. ನಂದೇಶ್ವರ್ ಗೌಡ ಹೈದರಾಬಾದ್ ನ ಅಬಿಡ್ಜ್ ಪೊಲೀಸ್ ಠಾಣೆಯಲ್ಲಿ ವರ್ಮ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ತಮ್ಮ ಟ್ವೀಟ್ ವಿವಾದಕ್ಕೆ ತಿರುಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ರಾಮ್ ಗೋಪಾಲ್ ವರ್ಮ, ಇದನ್ನು ನಾನು ಕೇವಲ ವ್ಯಂಗ್ಯವಾಗಿ ಹೇಳಿದೆಯಷ್ಟೆ, ಅದು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ. ಮಹಾಭಾರತದಲ್ಲಿ ದ್ರೌಪದಿ ನನ್ನ ಅಚ್ಚುಮೆಚ್ಚಿನ ಪಾತ್ರ. ಈಗ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಪರೂಪದ್ದಾಗಿರುವುದರಿಂದ ಅವರ ಹೆಸರನ್ನು ಮಹಾಭಾರತದ ದ್ರೌಪದಿ ಪಾತ್ರಕ್ಕೆ ಹೋಲಿಸಿ ಟ್ವೀಟ್ ಮಾಡಿದೆ ಅಷ್ಟೆ, ಅದು ಬಿಟ್ಟರೆ ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ನನಗಿರಲಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!