ಹೊಸದಿಗಂತ ಡಿಜಿಟಲ್ ಡೆಸ್ಕ್
ನವಿ ಮುಂಬೈನ ಪನ್ವೆಲ್ ಪ್ರದೇಶದ ಬಂಗಲೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ವೇಳೆ ತನ್ನ ಮೂವರು ಮಕ್ಕಳನ್ನು ರಕ್ಷಿಸಿದ ವ್ಯಕ್ತಿ, ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಟನಾ ವೃತ್ತಿಯಲ್ಲಿ ಗುರುತಿಸಿಕೊಂಡಿದ್ದ ರಾಜೀವ್ ಠಾಕೂರ್ (38) ಮೃತಪಟ್ಟ ದುರ್ದೈವಿ. ಅಕುರ್ಲಿ ಗ್ರಾಮದಲ್ಲಿರುವ ರಾಝೀವ್ ಅವರ ಎರಡಂತಸ್ತಿನ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಬೆಳಗಿನ ವೇಳೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸಂಪೂರ್ಣ ಮನೆಯನ್ನು ಆವರಿಸುವ ಮುನ್ನ ಎಚ್ಚತ್ತ ಠಾಕೂರ್ ತನ್ನ ಮೂವರು ಮಕ್ಕಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಗೆ ಕಳುಹಿಸಿದ್ದಾರೆ. ನಂತರ ಅವರು ತಮ್ಮ ಲ್ಯಾಪ್ಟಾಪ್, ಸ್ಕ್ರಿಪ್ಟ್ಗಳು, ದಾಖಲೆಗಳನ್ನು ತರಲು ಮೊದಲ ಮಹಡಿಯ ಮಲಗುವ ಕೋಣೆಗೆ ಹೋಗಿದ್ದ ರಾಜೀವ್ ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ. ಸುಟ್ಟಗಾಯಗಳಿಂದ ಬಳಲುತ್ತಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ʼಅವಘಡದ ವೇಳೆ ಅವರ ಪತ್ನಿ ಮನೆಯಲ್ಲಿ ಇರಲಿಲ್ಲʼ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ಅಗ್ನಿಶಾಮಕ ವಾಹನಗಳು ಎರಡು ಗಂಟೆಗಳ ಕಾಲ ಕಾರ್ಯಚರನೆ ನಡೆಸಿ ಮನೆಗೆ ಹಬ್ಬಿದ್ದ ಬೆಂಕಿಯನ್ನು ನಂದಿಸಿವೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ