ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಸೇನೆ ಮುಖಂಡ, ರಾಜ್ಯಸಭೆ ಸದಸ್ಯ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಎರಡನೇ ಸಮನ್ಸ್ ಜಾರಿ ಮಾಡಿದೆ. ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಸಂಜಯ್ ರಾವತ್ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಮೊದಲು ಸಮನ್ಸ್ ನೀಡಿತ್ತು. ಆದರೆ, ಇಂದು ರಾವತ್ ವಿಚಾರಣೆಗೆ ಹೋಗಿರಲಿಲ್ಲ. ಇತ್ತ, ಇವರ ಪರ ವಕೀಲರು 13-14 ದಿನಗಳ ಕಾಲಾವಕಾಶವನ್ನೂ ಇಡಿಗೆ ಕೋರಿದ್ದರು.
ಇದೀಗ ಮೂರೇ ದಿನಗಳ ಹೆಚ್ಚುವರಿ ಸಮಯವನ್ನು ನೀಡಿ ಜುಲೈ 1ಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ. ಅಲ್ಲದೇ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖವಾದ ದಾಖಲೆಗಳನ್ನು ತರುವಂತೆ ರಾವುತ್ ಅವರಿಗೆ ತಿಳಿಸಲಾಗಿದೆ.ಪತ್ರಾಚಲ್ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿದೆ.