ಹೊಸದಿಗಂತ ವರದಿ, ಮಡಿಕೇರಿ:
ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆಗೈದ ಆರೋಪಿಗಳನ್ನು ಪೊಲೀಸರು ಇಂದು ಕೋರ್ಟ್ ಮುಂದೆ ಹಾಜರುಪಡಿಸಿದರು.
ಹಂತಕರಾದ ಮಹಾಂತೇಶ ಶಿರೂರು ಹಾಗೂ ಮಂಜುನಾಥ ದುಮ್ಮವಾಡ ಅವರನ್ನು ಹುಬ್ಬಳ್ಳಿಯ ಒಂದನೇ ಅಧಿಕ ದಿವಾಣಿ ಹಾಗೂ ಜೆಎಂಎಫ್ಸಿ ನ್ಯಾಯಾಲಯಕ್ಕೆ ವಿದ್ಯಾನಗರ ಪೊಲೀಸರು ಹಾಜರುಪಡಿಸಿದರು.
ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿ ಒಪ್ಪಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ