May 7, 2026
Thursday, May 7, 2026
spot_img

ನಿಲ್ಲದ ಕಬ್ಬು ಬೆಳೆಗಾರರ ಹೋರಾಟ: ಕಬ್ಬಿಗೆ 3500 ರೂ.ದರ ಘೋಷಿಸಲು ಪಟ್ಟು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆ ಮುಧೋಳ ಭಾಗದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಉಗ್ರಸ್ವರೂಪವನ್ನು ಪಡೆದುಕೊಂಡಿದೆ.

ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಯುತ್ತಿದ್ದ ಹೋರಾಟ ತಾಲೂಕಿನ ಪ್ರತೀ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಬೇರೆ ಬೇರೆ ಊರುಗಳಿಗೆ ಸಂಪರ್ಕ ಕಲ್ಪಿಸುವ ತಾಲೂಕು ರಸ್ತೆ, ಜಿಲ್ಲಾ ರಸ್ತೆ, ರಾಜ್ಯ ಹೆದ್ದಾರಿ ರಸ್ತೆಗಳನ್ನು ಬಂದ್ ಮಾಡಿ ರೈತರು ಕಬ್ಬಿನ ಬೆಲೆಗಾಗಿ ಪ್ರತಿಭಟನೆ ನಡೆಸಿದ್ದಾರೆ. ಇ

ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈತರು ಟನ್‌ ಕಬ್ಬಿಗೆ 3500 ರೂ. ಸಿಗೋವರೆಗೂ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !