ಹೊಸದಿಗಂತ ವರದಿ ಬೀದರ್:
ಮುಂಬರುವ ಎರಡು ದಿನಗಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದಾರೆ. ಶುಕ್ರವಾರ ಹಾಗೂ ಶನಿವಾರ ಬೆಳಿಗ್ಗೆಯಿಂದಲೇ ದಿನವಿಡೀ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಒಳ ಚರಂಡಿ ಕಾಮಗಾರಿಗಾಗಿ ರಸ್ತೆ ಅಗೆದಿರುವ ಕಾರಣ ಬೀದರ್ ನಗರದೆಲ್ಲೆಡೆ ಪ್ರಮುಖ ರಸ್ತೆಗಳಲ್ಲಿ ಕೆಸರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜು. 2 ರಿಂದ ಜು. 8 ರವರೆಗೆ ಜಿಲ್ಲೆಯಾದ್ಯಂತ ವಾಡಿಕೆಯ ಮಳೆ ಪ್ರಮಾಣ 34.8 ಮಿಮೀ. ಇಲ್ಲಿವರೆಗೆ 60.8 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.