ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಮುಂಜಾನೆ ದಕ್ಷಿಣ ಕನ್ನಡ, ಕೊಡಗು ಗಡಿ ಭಾಗದಲ್ಲಿ ಸಂಭವಿಸಿದ ಭೂಕಂಪನದ ಕೇಂದ್ರ ಬಿಂದುವನ್ನು ಸುಳ್ಯ ಸಮೀಪದ ಅರಂತೋಡಿನಲ್ಲಿ ಗುರುತಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಮಾಹಿತಿ ನೀಡಿದೆ
ಭಾನುವಾರ ಮುಂಜಾನೆ 6.42ರ ಸುಮಾರಿಗೆ ನಡುಗಿದ ಭೂಮಿ ನಾಗರಿಕರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಈ ಭಾಗದಲ್ಲಿ ಮಳೆಯೂ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಯಾವಾಗ ಏನಾಗುತ್ತದೋ ಎಂಬ ಭಯದಲ್ಲಿ ನಾಗರಿಕರು ದಿನಕಳೆಯುತ್ತಿದ್ದಾರೆ.