May 20, 2026
Wednesday, May 20, 2026
spot_img

ಮಾನವ-ವನ್ಯಜೀವಿ ಸಂಘರ್ಷಕ್ಕೆ ಬ್ರೇಕ್: ಗದ್ದೆ, ತೋಟದಲ್ಲಿ ಹುಲಿ, ಆನೆ ಕಂಡರೆ ಇನ್ಮುಂದೆ 1926ಕ್ಕೆ ಡಯಲ್ ಮಾಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಡು ಪ್ರಾಣಿಗಳು ನಾಡಿಗೆ ನುಗ್ಗುವ ಪ್ರಕರಣಗಳ ಕುರಿತು ತುರ್ತಾಗಿ ಸ್ಪಂದಿಸುವ ಸಲುವಾಗಿ ಅರಣ್ಯ ಇಲಾಖೆಯ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

ಯಾವುದೇ ವನ್ಯಜೀವಿ (ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ) ತೋಟ, ಹೊಲ, ಅಥವಾ ಗದ್ದೆಗಳಲ್ಲಿ ಕಾಣಿಸಿಕೊಂಡರೆ, ಸ್ಥಳೀಯ ಜನರು 1926 ಸಂಖ್ಯೆಗೆ ಉಚಿತ ಕರೆ ಮಾಡುವ ಮೂಲಕ ದೂರು ದಾಖಲಿಸಬಹುದು.

ದೂರು ಸ್ವೀಕರಿಸಿದ ಕೂಡಲೇ:

ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ.

ಸಂಬಂಧಿತ ವಲಯಕ್ಕೆ ಕೂಡಲೇ ಮಾಹಿತಿಯನ್ನು ರವಾನಿಸಿ, ತಕ್ಷಣ ಕ್ರಮ ಕೈಗೊಳ್ಳಲು ಸೂಚಿಸಲಾಗುತ್ತದೆ.

ಸಚಿವರು ಹೇಳಿರುವಂತೆ, ಈ ಹೊಸ ವ್ಯವಸ್ಥೆಯಲ್ಲಿ ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ರಂತಹ ಉನ್ನತಾಧಿಕಾರಿಗಳು ದೂರುಗಳಿಗೆ ಸ್ಪಂದಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವ ಮೂಲಕ ನಿರಂತರವಾಗಿ ನಿಗಾ ವಹಿಸಲಿದ್ದಾರೆ. ಉನ್ನತಾಧಿಕಾರಿಗಳ ಈ ತೀವ್ರ ನಿಗಾದಿಂದಾಗಿ, ವಲಯ ಅಧಿಕಾರಿಗಳು ವಿಳಂಬವಿಲ್ಲದೆ ತುರ್ತಾಗಿ ಸ್ಪಂದಿಸಲಿದ್ದಾರೆ. ಈ ಮೂಲಕ ಮಾನವ-ವನ್ಯಜೀವಿ ಸಂಘರ್ಷದ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಇಲಾಖೆ ಸಜ್ಜಾಗಿದೆ ಎಂದು ಸಚಿವ ಖಂಡ್ರೆ ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !