July 17, 2026
Friday, July 17, 2026
spot_img

ದೆಹಲಿ ಕಾರು ಸ್ಪೋಟ ಕೇಂದ್ರ ಸರ್ಕಾರದ ವೈಫಲ್ಯ: ಮಲ್ಲಿಕಾರ್ಜುನ ಖರ್ಗೆ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ನಡೆದ ಸ್ಫೋಟ ಕೇಂದ್ರ ‘ಸರ್ಕಾರದ ವೈಫಲ್ಯ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ, ಭಯೋತ್ಪಾದಕ ಕೃತ್ಯದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಕೊಡಬೇಕು. ಆಗ ಮಾತ್ರ ಉಗ್ರತ್ವವನ್ನು ತಡೆಗಟ್ಟಲು ಸಾಧ್ಯ ಎಂದು ಒತ್ತಾಯಿಸಿದರು.

ದೇಶದ ಭದ್ರತೆಗೆ ಸಂಬಂಧಿಸಿದಂತೆ NIA, RAWದಂತ ಉನ್ನತ ಸಂಸ್ಥೆಗಳು ಕಾರ್ಯನಿರ್ವಹಿಸುವ ರಾಷ್ಟ್ರ ರಾಜಧಾನಿಯಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ದೆಹಲಿಯಲ್ಲಿ ಅಂತಹ ಎಲ್ಲಾ ಸಂಸ್ಥೆಗಳು ಇದ್ದರೂ, ಸರ್ಕಾರ ವಿಫಲವಾಗಿದೆ. ತಮ್ಮ ಪಕ್ಷವು ಸಂಪೂರ್ಣ ವರದಿಗಾಗಿ ಕಾಯುತ್ತದೆ ಎಂದು ಹೇಳಿದರು.

ಸ್ಫೋಟದ ಬಗ್ಗೆ ಕಾಂಗ್ರೆಸ್ ಪಕ್ಷವು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸುತ್ತದೆ. ಸ್ಫೋಟದ ಹಿಂದೆ ಇರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಇದರಿಂದ ಇತರರು ಹಾಗೆ ಮಾಡಲು ಹೆದರಬೇಕು ಎಂದು ಅವರು ಹೇಳಿದರು. ಮುಂದಿನ ತಿಂಗಳು ಚಳಿಗಾಲದ ಅಧಿವೇಶನದಲ್ಲಿ ತಮ್ಮ ಪಕ್ಷವು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಿದೆ ಎಂದು ಖರ್ಗೆ ಹೇಳಿದರು.

ತನಿಖಾ ವರದಿ ಹೊರಬರಲಿ. ಡಿಸೆಂಬರ್ 1ರಿಂದ ಸಂಸತ್ತಿನ ಅಧಿವೇಶನ ಪ್ರಾರಂಭವಾಗಲಿದೆ. ಅದರ ನಂತರ ನೋಡೋಣ ಎಂದು ಖರ್ಗೆ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !