ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಈ ಮೂಲಕ ಈವರೆಗೆ ಕ್ಷೇತ್ರದ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಶಿವಮೊಗ್ಗದ ಶಿಕಾರಿಪುರದ ಅಂಜನಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಶಿಕಾರಿಪುರದಿಂದ ಸ್ಪರ್ಧಿಸುವುದಿಲ್ಲ. ವಿಜಯೇಂದ್ರ ಅವರೇ ಸ್ಪರ್ಧಿಸುತ್ತಾರೆ. ನನಗಿಂತ ಹೆಚ್ಚು ಅಂತರದಲ್ಲಿ ಗೆಲ್ಲಿಸಿಕೊಡಬೇಕೆಂದು ಶಿಕಾರಿಪುರದ ಜನರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.
ಮೈಸೂರು ಭಾಗದಲ್ಲಿಯೂ ಸಹ ಸ್ಪರ್ಧಿಸುವಂತೆ ಕೂಗು ಕೇಳಿ ಬಂದಿತ್ತು. ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ ವಿಜಯೇಂದ್ರ ಶಿಕಾರಿಪುರದಲ್ಲೇ ನಿಲ್ಲುತ್ತಾರೆ ಎಂದರು.