ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಕೋಟ ಸಮೀಪದ ಪಾರಂಪಳ್ಳಿ ಪಡುಕರೆಯಲ್ಲಿ ಕಡಲ ಕಿನಾರೆಯಲ್ಲಿ ಮೀನುಗಾರಿಕೆ ತೆರಳಿದ ಸಂದರ್ಭದಲ್ಲಿ ದೋಣಿ ಮಗುಚಿ ಒರ್ವ ಸಾವಿಗಿಡಾಗಿದ್ದು, ಇಬ್ಬರು ಪಾರಾದ ಘಟನೆ ಶುಕ್ರಮವಾರ ನಡೆದಿದೆ.
ಸಾವಿಗಿಡಾದ ಮೀನುಗಾರ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಎಂದು ಗುರುತಿಸಲಾಗಿದೆ.
ಶುಕ್ರವಾರ ಪೂರ್ವಾಹ್ನ 11.ಗ ಸ್ಥಳೀಯರಾದ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಮೂವರು ಮೀನುಗಾರಿಕೆ ತೆರಳಲು ನಾಡದೋಣಿಯ ಮೂಲಕ ಸಮುದ್ರಕ್ಕೆ ತೆರಳಿದರು ಎನ್ನಲಾಗಿದ್ದು , ಈ ವೇಳೆ ಸಮುದ್ರದ ಬಾರಿ ಗಾತ್ರದ ಅಲೆಗೆ ಸಿಲುಕಿ ದೋಣಿಯಲ್ಲಿದ್ದ ಈ ಮೂವರು ಮಗುಚಿ ಬಿದ್ದಿದ್ದು, ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ.
ಆದರೆ ಮೃತ ಸುಮಂತ್ ಗೆ ಸಮುದ್ರದ ಬಾರಿ ಗಾತ್ರದ ಅಲೆಗಳ ನಡುವೆ ಈಜಿದರೂ ಪ್ರಯೋಜನ ಬಾರದೆ ಸಮುದ್ರದ ಅಲೆಗಳೊಂದಿಗೆ ಕೊಚ್ಚಿ ಹೋದರು ಎನ್ನಲಾಗಿದೆ.
ಅಲ್ಲೇ ಸಮೀಪ ಮೀನುಗಾರಿಕೆ ನಡೆಸುತ್ತಿದ್ದ ಸ್ಥಳೀಯರು ಬಲೆ ಬಿಸಿ ಸುಮಂತ್ ನನ್ನು ಮೇಲೆ ಎಳೆದಿದ್ದು ತಕ್ಷಣ ಅವರನ್ನು ಜೀವನ್ ಮಿತ್ರ ಆ್ಯಂಬುಲೇನ್ಸ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.