ಹೊಸದಿಗಂತ ವರದಿ, ಮೈಸೂರು:
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಭಾನುವಾರ ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ವೈಯಕ್ತಿಕವಾಗಿ 50 ಸಾವಿರ ಲಾಡು ಪ್ರಸಾದ್ ವನ್ನು ಭಕ್ತಾದಿಗಳಿಗೆ ಸ್ವತಃ ನಿಂತು ವಿತರಣೆ ಮಾಡಿದರು. ದೇವರ ದರ್ಶನ ಮಾಡಿ ಬರುವ ಎಲ್ಲಾ ಭಕ್ತಾದಿಗಳಿಗೆ ಸಂಜೆ ವರೆಗೂ ಪ್ರಸಾದ್ ವಿತರಣೆ ನಡೆಯಲಿದೆ.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್, ಮುಖಂಡರಾದ ಶ್ರೀವತ್ಸ, ಮಂಗಳ ಸೋಮಶೇಖರ್, ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸಿ.ಜಿ.ಕೃಷ್ಣ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ