ಒಂದು ರೂಪಾಯಿ-ವೈದ್ಯ ಖ್ಯಾತಿಯ ಸುಶೋವನ್ ಬಂಡೋಪಾಧ್ಯಾಯ ನಿಧನ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಪಶ್ಚಿಮ ಬಂಗಾಳದ ‘ಒಂದು ರೂಪಾಯಿ-ವೈದ್ಯ’ ಖ್ಯಾತಿಯ ಬಿರ್ಭುಮ್ ಸುಶೋವನ್ ಬಂಡೋಪಾಧ್ಯಾಯ ಅವರ ವಿಧಿವಶರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

‘ಏಕ್ ತಕಾರ್ ದಕ್ತಾರ್’ ಎಂದು ಪ್ರೀತಿಯಿಂದ ಕರೆಯಲ್ಪಡುವ ಸುಶೋವನ್, ಬಿರ್ಭುಮ್‌ನ ಬೋಲ್ಪುರದಲ್ಲಿ ರೋಗಿಗಳಿಗೆ ಕೇವಲ 1 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದರು. ಸುಶೋವನ್ ಒಮ್ಮೆ ಬೋಲ್ಪುರದಿಂದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾದರು. ಇನ್ನು ತೃಣಮೂಲ ಕಾಂಗ್ರೆಸ್ ರಚನೆಯಾದ ನಂತರ, ಅವರು ಬಿರ್ಭೂಮ್‌ನಲ್ಲಿ ತೃಣಮೂಲದ ಮೊದಲ ಜಿಲ್ಲಾ ಅಧ್ಯಕ್ಷರಾಗಿದ್ದರು.

ಸುಶೋವನ್ ಬಂಡೋಪಾಧ್ಯಾಯ ಅವರು ಮಾನವ ಚೈತನ್ಯದ ಅತ್ಯುತ್ತಮತೆಯನ್ನ ಪ್ರತಿಬಿಂಬಿಸಿದ್ದಾರೆ. ಅನೇಕ ಜನರನ್ನ ಗುಣಪಡಿಸಿದ ದಯಾಪರ ಮತ್ತು ವಿಶಾಲ ಹೃದಯದ ವ್ಯಕ್ತಿಯಾಗಿ ಅವ್ರನ್ನ ನೆನಪಿಸಿಕೊಳ್ಳಲಾಗುವುದು. ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರೊಂದಿಗೆ ನಾನು ನಡೆಸಿದ ಸಂವಾದ ನೆನಪಿಸಿಕೊಳ್ಳುತ್ತಿದ್ದೇನೆ. ಇನ್ನು ಅವ್ರ ನಿಧನದಿಂದ ದುಃಖಿತನಾಗಿದ್ದು, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’ ಮೋದಿ ಎಂದಿದ್ದಾರೆ.

ಡಾ. ಸುಶೋವನ್ ಅವ್ರಿಗೆ 2020ರಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ನೀಡಿ ಗೌರವಿಸಲಾಯಿತು ಮತ್ತು ಅದೇ ವರ್ಷದಲ್ಲಿ, ಗರಿಷ್ಠ ಸಂಖ್ಯೆಯ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಅವರ ಹೆಸರು ದಾಖಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!