ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪರಿಸರದಲ್ಲಿ ಬಿಜೆಪಿ ಯುವ ನಾಯಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೆ ಯತ್ನ ನಡೆಸಿರುವ ಭೀಕರ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ದಾಳಿಗೊಳಗಾದವರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಪ್ರವೀಣ್ ಅಂಗಡಿ ಉದ್ಯಮ ನಡೆಸುತ್ತಿದ್ದು, ರಾತ್ರಿ ತನ್ನ ಅಂಗಡಿ ಮುಚ್ಚಿ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ತಂಡ ಅವರ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರವೀಣ್ ಸಕ್ರೀಯರಾಗಿದ್ದು, ಯಾವ ಕಾರಣಕ್ಕೆ ಇವರ ಮೇಲೆ ದಾಳಿ ನಡೆದಿದೆ ಎಂಬುದು ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.