ಹೊಸದಿಗಂತ ಡಿಜಿಟಲ್ ಡೆಸ್ಕ್
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದು, ಹಂತಕರನ್ನು ಶೀಘ್ರವೇ ಬಂಧಿಸಿ ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5— Basavaraj S Bommai (@BSBommai) July 26, 2022
ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.