ಕಾಪು ಸಮುದ್ರದಲ್ಲಿ ನಾಡದೋಣಿ ಅಪಘಾತ: ಐವರು ಮೀನುಗಾರರ ರಕ್ಷಣೆ

ಹೊಸದಿಗಂತ ವರದಿ,ಮಂಗಳೂರು:

ನಗರ ಹೊರವಲಯದ ತೋಟಬೆಂಗ್ರೆಯ ನಾಡದೋಣಿಯೊಂದು ಕಾಪು ಲೈಟ್ ಹೌಸ್ ಬಳಿ ಸಮುದ್ರದಲ್ಲಿ ಬುಧವಾರ ಬೆಳಗ್ಗೆ ಅಪಘಾತಕ್ಕೀಡಾಗಿದ್ದು, ದೋಣಿಯಲ್ಲಿದ್ದ ಐವರು ಸುರಕ್ಷಿತವಾಗಿ ದಡ ಸೇರಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಆದರೆ, ನಾಡದೋಣಿಗೆ ಹಾನಿಯಾಗಿ ೧೫ ಲಕ್ಷ ರೂ.ವಿಗೂ ಅಧಿಕ ನಷ್ಟ ಸಂಭವಿಸಿದೆ.
ಮೀನುಗಾರಿಕೆಗೆ ತೆರಳಿದ್ದ ತೋಟಬೆಂಗ್ರೆಯ ಲತೀಶ್ ಪುತ್ರನ್ ಅವರ ನಾಡದೋಣಿ ಇಂಜಿನ್‌ನ ತಾಂತ್ರಿಕ ದೋಷದಿಂದ ಗಾಳಿಯ ರಭಸಕ್ಕೆ ಸಿಲುಕಿ ಕಾಪು ಲೈಟ್ ಹೌಸ್ ನೇರವಿರುವ ಬಂಡೆಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರು ಈಜಿ ಬಂಡೆಯಲ್ಲಿ ರಕ್ಷಣೆ ಪಡೆದಿದ್ದಾರೆ. ಬಳಿಕ ಮೀನುಗಾರರು ಬೇರೆ ದೋಣಿಯವರ ಸಹಾಯದಿಂದ ಮಲ್ಪೆ ಬಂದರು ತಲುಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!