ಹೊಸದಿಗಂತ ವರದಿ, ಮಂಗಳೂರು:
ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ಆ.4 ರಂದು ಗುರುವಾರ ರಜೆ ಘೋಷಿಸಲಾಗಿದೆ.
ಕಡಬ ಮತ್ತು ಜಿಲ್ಲೆಯ ಇತರ ತಾಲೂಕುಗಳಲ್ಲಿ ಅಗತ್ಯವಿದ್ದರೆ ಬಿಇಒ ಹಾಗೂ ತಹಶಿಲ್ದಾರ್ ಅವರು ರಜೆ ನೀಡುವ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.