ವೈಯಕ್ತಿಕ ಸಾಲಕ್ಕೆ ಬೇಸತ್ತು ಯುವಕ ನೇಣಿಗೆ ಶರಣು

ಹೊಸದಿಗಂತ ವರದಿ, ವಿಜಯಪುರ:

ವೈಯಕ್ತಿಕ ಸಾಲಕ್ಕೆ ಬೇಸತ್ತು ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ
ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಮಾಲಪ್ಪ ಭೀಮಪ್ಪ ಲೋಕೂರ (24) ಆತ್ಮಹತ್ಯೆಗೆ ಶರಣಾಗಿರುವ ಯುವಕ.
ಮಾಲಪ್ಪ ಲೋಕೂರ ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ಮನನೊಂದು ತಡವಲಗಾ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!