ಹೊಸದಿಗಂತ ಡಿಜಿಟಲ್ ಡೆಸ್ಕ್
ವ್ಯಕ್ತಿಯೊಬ್ಬರಿಂದ ಮೇವು ಸ್ವೀಕಾರ ಮಾಡಿದ್ದ ಉತ್ತರ ಪ್ರದೇಶದ ಅಮ್ರೋಹಾದ ಹಸನ್ಪುರ ಪ್ರದೇಶದ ಗೋಶಾಲೆಯೊಂದರಲ್ಲಿ ಗುರುವಾರ 50ಕ್ಕೂ ಹೆಚ್ಚು ಜಾನುವಾರುಗಳು ನಿಗೂಢವಾಗಿ ಸಾವನ್ನಪ್ಪಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಮತ್ತು ಪಶುಸಂಗೋಪನೆ ಸಚಿವ ಧರಂ ಪಾಲ್ ಸಿಂಗ್ ಅವರನ್ನು ಅಮ್ರೋಹಾಗೆ ತಲುಪುವಂತೆ ಸೂಚಿಸಿದ್ದಾರೆ. ಮೇವು ತಿಂದ ಹಸುಗಳು ಸಂಜೆ ಅಸ್ವಸ್ಥಗೊಂಡಿವೆ ಎಂದು ಅಮ್ರೋಹದ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿ.ಕೆ.ತ್ರಿಪಾಠಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು.
ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಗೋಶಾಲೆಯ ಆಶ್ರಯದಲ್ಲಿದ್ದ 50 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಲಾಂಗೆಹ್ ದೃಢಪಡಿಸಿದ್ದಾರೆ.
ಡಿಎಂ ಪ್ರಕಾರ, ಗೋಶಾಲೆಯ ಆಡಳಿತವು ತಾಹಿರ್ ಎಂಬ ವ್ಯಕ್ತಿಯಿಂದ ಮೇವನ್ನು ಸಂಗ್ರಹಿಸಿದೆ. ತಾಹಿರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತನನ್ನು ಬಂಧಿಸಲು ಎಂದು ಡಿಎಂ ತಿಳಿಸಿದ್ದಾರೆ.
ಗೋಶಾಲೆಯ ಉಸ್ತುವಾರಿ ಹೊತ್ತಿರುವ ಗ್ರಾಮಾಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅನಾರೋಗ್ಯದ ಹಸುಗಳ ಚಿಕಿತ್ಸೆಗಾಗಿ ಪಶು ವೈದ್ಯರ ತಂಡವನ್ನು ಕಳುಹಿಸಲು ಸಿಎಂ ಆದೇಶ ನೀಡಿದ್ದಾರೆ ಎಂದು ಎಂದು ಸಿಎಂ ಕಚೇರಿ ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ಟ್ವೀಟ್ ಮಾಡಿದೆ. “ಘಟನೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಯಾರನ್ನೂ ಬಿಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ” ಎಂದು ಮತ್ತೊಂದು ಟ್ವೀಟ್ ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ