ಹೊಸದಿಗಂತ ಡಿಜಿಟಲ್ ಡೆಸ್ಕ್
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಗುಲಾಂ ನಬಿ ಆಜಾದ್ ಮಾತು ಆಡಿದ್ದಾರೆ .
ರಾಹುಲ್ ಗಾಂಧಿ ಒಳ್ಳೆಯ ಮನುಷ್ಯ. ಆದರೆ ರಾಜಕೀಯಕ್ಕೆ ಬೇಕಾದ ಗುಣಗಳನ್ನು ಆತ ಹೊಂದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವುದೇ ಆತನ ನೀತಿಯಾಗಿದೆ ಎಂದರು.ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಅರ್ಥಹೀನವಾಗಿದೆ. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಅವರ ಕಾಲದಲ್ಲಿ ನಡೆಯುತ್ತಿದ್ದ ಸಮಾಲೋಚನಾ ಪ್ರಕ್ರಿಯೆ ಈಗ ಅಲ್ಲಿ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸೋನಿಯಾ ಗಾಂಧಿಗೆ ನೀಡಿದ ಐದು ಪುಟಗಳ ರಾಜೀನಾಮೆ ಪತ್ರದಲ್ಲಿ, ಆಜಾದ್ 2014 ರ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯವರನ್ನು ದೂಷಿಸಿದ್ದರು. ರಾಹುಲ್ ವರ್ತನೆ ಚಿಕ್ಕ ಮಕ್ಕಳಂತಿದೆ. ಸ್ವಪಕ್ಷದಲ್ಲಿಯೇ ತಮ್ಮನ್ನು ಮೂಲೆಗುಂಪು ಮಾಡಿರುವ ಭಾವನೆ ತಮಗೆ ವ್ಯಕ್ತವಾಗುತ್ತಿದೆ ಎಂದು ಗುಲಾಂ ನಬಿ ಆಜಾದ್ ಬೇಸರಿಸಿದ್ದರು.