September 10, 2026
Thursday, September 10, 2026
spot_img

ಭಯೋತ್ಪಾದನೆ ಕುರಿತು ಯಾವುದೇ ಸಮರ್ಥನೆಗೆ ಅವಕಾಶವಿಲ್ಲ: ಕೇಂದ್ರ ಸಚಿವ ಎಸ್. ಜೈಶಂಕರ್ ಖಡಕ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಯೋತ್ಪಾದನೆ ಕುರಿತು ಯಾವುದೇ ಸಮರ್ಥನೆಯಿಲ್ಲ, ವೈಟ್​ವಾಶ್ ಮಾಡಲು ಸಾಧ್ಯವಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಖಡಕ್ ಸಂದೇಶ ನೀಡಿದ್ದಾರೆ.

ಇಂದು ರಷ್ಯಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಯೋತ್ಪಾದನೆಯ ಕುರಿತು ತೀಕ್ಷ್ಣವಾದ ಸಂದೇಶವನ್ನು ನೀಡಿದ ಅವರು, ಅಭಿವ್ಯಕ್ತಿಗಳಲ್ಲಿನ ಬೆದರಿಕೆಗೆ ಜಗತ್ತು ಶೂನ್ಯ ಸಹಿಷ್ಣುತೆ ತೋರಿಸಬೇಕು ಎಂದು ಅವರು ಘೋಷಿಸಿದ್ದಾರೆ.

ಭಾರತವು ಭಯೋತ್ಪಾದನೆಯ ವಿರುದ್ಧ ತನ್ನ ಜನರನ್ನು ರಕ್ಷಿಸುವ ಹಕ್ಕನ್ನು ಹೊಂದಿದೆ ಮತ್ತು ಭಾರತ ಆ ಹಕ್ಕನ್ನು ಚಲಾಯಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ.

ಜಗತ್ತು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಿಗೆ ಶೂನ್ಯ ಸಹಿಷ್ಣುತೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.

ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟವನ್ನು ಭಯೋತ್ಪಾದಕ ದಾಳಿ ಎಂದು ಪರಿಗಣಿಸಿ ತನಿಖೆಯನ್ನು NIAಗೆ ಹಸ್ತಾಂತರಿಸುವಂತೆ ಕೇಂದ್ರವು ನಿರ್ದೇಶಿಸಿದ ಕೆಲವೇ ದಿನಗಳಲ್ಲಿ ಜೈಶಂಕರ್ ಈ ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !