ನಾನು ಎಂದಿಗೂ ಶಕ್ತಿಧಾಮದ ಸ್ವಯಂಸೇವಕನಾಗಿರುತ್ತೇನೆ: ನಟ ವಿಶಾಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾನು ಎಂದಿಗೂ ಶಕ್ತಿಧಾಮದ ಸ್ವಯಂಸೇವಕನಾಗಿರುತ್ತೇನೆ. ಇದಕ್ಕೆ ರಾಜ್ ಕುಟುಂಬದವರು ಅನುಮತಿ ನೀಡಬೇಕು ಎಂದು ತಮಿಳುನಟ ವಿಶಾಲ್ ಅವರು ದೊಡ್ಮನೆ ಕುಟುಂಬಕ್ಕೆ ಮನವಿ ಮಾಡಿದ್ದಾರೆ.
ಅವರು ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮಕ್ಕೆ ಭೇಟಿ ನೀಡಿ, ಟ್ರಸ್ಟಿಗಳು ಹಾಗೂ ಮಕ್ಕಳೊಂದಿಗೆ ಮಾತನಾಡಿದರು.
ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿದೆ. ದೇವಸ್ಥಾನಕ್ಕೆ ಹೋದರೆ ಒಂದು ದೇವರ ದರುಶನ ಪಡೆಯಬಹುದು. ಆದರೆ, ಇಲ್ಲಿ ಒಂದೊಂದು ಮಕ್ಕಳಲ್ಲೂ ಒಂದೊಂದು ದೇವರನ್ನು ನೋಡಿದೆ ಎಂದು ಹೇಳಿದರು.
ಪುನೀತ್ ರಾಜ್ ಕುಮಾರ್​ ಹಾಗೂ ಗೀತಮ್ಮ ಅವರದ್ದು ಅತ್ಯುತ್ತಮ ಕೆಲಸ. ಈ ಬಗ್ಗೆ ಶಿವಕುಮಾರ್​ ಜೊತೆ ಮಾತನಾಡಿದ್ದೇನೆ. ರಾಜ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಇಲ್ಲಿನ ಮಕ್ಕಳು ತುಂಬಾ ಉತ್ಸಾಹದಿಂದ ಇದ್ದಾರೆ. ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!