ದಿಗಂತ ವರದಿ ವಿಜಯಪುರ:
ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮ ದಿನ ನಿಮಿತ್ತ ಬಿಜೆಪಿ ನಗರ ಮಂಡಳ ಹಾಗೂ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಇಲ್ಲಿನ ಗ್ಯಾಂಗ್ ಬಾವಡಿಯಲ್ಲಿರುವ ಯಂತ್ರೋದ್ಧಾರ ಹನುಮಾನ್ ಮಂದಿರದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಕಾರ್ಯಕರ್ತರು, ಸ್ಥಳೀಯರು ರಕ್ತದಾನ ಮಾಡಿದರು. 50 ಕ್ಕೂ ಹೆಚ್ಚು ಜನರಿಂದ ರಕ್ತದಾನ ನಡೆಯಿತು.
ರಕ್ತದಾನ ಶಿಬಿರದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ, ಯುವ ಮೊರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಹಾಗೂ ಗಣ್ಯರು ಇದ್ದರು.