ಹೊಸದಿಗಂತ ಡಿಜಿಟಲ್ ಡೆಸ್ಕ್
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿಸುವ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.ಹೀಗಾಗಿ ಅವರಿಗೆ ಇಂದು ಜೈಲೇ ಗತಿ ಎನ್ನುವಂತೆ ಆಗಿದೆ.
ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನದಲ್ಲಿರುವ ಸ್ವಾಮೀಜಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗಾಗಿ ಅವರ ಪರ ವಕೀಲರು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇಂದು ಕೂಡ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಪೀಠವು, ವಿಚಾರಣೆಯನ್ನು ಮತ್ತೆ ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಇನ್ನೂ ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ 4ನೇ ಆರೋಪಿ ಪರಮಶಿವಯ್ಯ ಹಾಗೂ 5ನೇ ಆರೋಪಿ ಗಂಗಾಧರ್ ಅವರ ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 21ಕ್ಕೆ ಚಿತ್ರದುರ್ಗದ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದೂಡಿಕೆ ಮಾಡಿದೆ.