Saturday, November 22, 2025

WEATHER | ಉತ್ತರ ಒಳನಾಡಿನ ಹಲವೆಡೆ ಮಳೆ, ಹೇಗಿದೆ ಉಳಿದೆಡೆ ವಾತಾವರಣ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ವಾತಾವರಣ ಮತ್ತು ಒಣ ಹವೆ ಮುಂದುವರಿದಿದ್ದು, ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಣ್ಣಪ್ರಮಾಣದ ಮಳೆಯಾಗುವ ಸಾಧ್ಯತೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಕಲಬುರಗಿ ಭಾಗದಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿಯೂ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರು ನಗರದಲ್ಲಿ ಬೆಳಗ್ಗಿನ ವೇಳೆ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​​ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ. ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಬೀದರ್​​ನಲ್ಲಿ ಇತ್ತೀಚೆಗೆ ರಾಜ್ಯದಲ್ಲೇ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್​ ದಾಖಲಾಗಿತ್ತು.

ಕೆಲವು ಪ್ರದೇಶಗಳಲ್ಲಿ ಹೆಚ್ಚು ಚಳಿ ಇರುವುದು ಗಮನಕ್ಕೆ ಬಂದಿದ್ದು, ಕರಾವಳಿ ಪ್ರದೇಶಗಳು ಮತ್ತು ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ಗಳಷ್ಟು ತಾಪಮಾನ ಏರಿಳಿಕೆಯಾಗಿದೆ. ಆದರೆ ದಕ್ಷಿಣ ಒಳನಾಡಿನ ಹೆಚ್ಚಿನ ಪ್ರದೇಶಗಳಲ್ಲಿ ಯಾವುದೇ ಮಹತ್ತರ ಬದಲಾವಣೆ ಕಂಡುಬಂದಿಲ್ಲ. 

error: Content is protected !!