ದಿಗಂತ ವರದಿ ವಿಜಯಪುರ:
ಬೈಕ್ – ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಯಾದಗಿರಿ ತಾಲೂಕಿನ ಗಿರಿನಗರ ಗ್ರಾಮದ ನಿವಾಸಿ ಹಣಮಂತ ಸತ್ಯಪ್ಪ ಮೀನುಗಾರ (50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.
ಬೈಕ್ ನ ಹಿಂಬದಿ ಸವಾರ ಮೃತನ ಪುತ್ರ ರವಿಚಂದ್ರ(17) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ ಐ ಕೆ.ವಾಲಿಕಾರ ಭೇಟಿ ನೀಡಿ ಪರಿಶೀಲಿಸಿದರು. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.