‘ಯಾರಿಗೂ ವೈಯುಕ್ತಿಕ ಅನುಮೋದನೆ ನೀಡುವುದಿಲ್ಲʼ: ಅಶೋಕ್‌ ಗೆಹ್ಲೋಟ್‌ಗೆ ಸ್ಪಷ್ಟಪಡಿಸಿದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಯಾವುದೇ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿಗೆ ತಮ್ಮ ವೈಯಕ್ತಿಕ ಅನುಮೋದನೆಯನ್ನು ನೀಡುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಮೂಲಗಳ ಪ್ರಕಾರ, ಪಕ್ಷದ ಅಧ್ಯಕ್ಷೀಯ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿರುತ್ತದೆ ಎಂದು ಸೋನಿಯಾ ಗಾಂಧಿ ಗೆಹ್ಲೋಟ್‌ಗೆ ತಿಳಿಸಿದ್ದಾರೆ. ಅಭ್ಯರ್ಥಿಯನ್ನು ಅಂತಿಮಗೊಳಿಸಿ ಗೆದ್ದಾಗ ಮಾತ್ರ ‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ ಎಂಬ ತತ್ವ ಬರುತ್ತದೆ ಎಂದು ಸೋನಿಯಾ ಗಾಂಧಿ ಗೆಹ್ಲೋಟ್‌ಗೆ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ನಾಯಕತ್ವಕ್ಕೆ ತಾವು ಪಕ್ಷದ ಮುಖ್ಯಸ್ಥರಾಗಿದ್ದರೂ ಸ್ವಲ್ಪ ಸಮಯದವರೆಗೆ ರಾಜಸ್ಥಾನ ಮುಖ್ಯಮಂತ್ರಿಯಾಗಿ ಉಳಿಯಲು ಬಯಸುವುದಾಗಿ ಹೇಳಿದ್ದರು.

ತನಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ಪೂರೈಸಲು ಸಿದ್ಧ ಮತ್ತು ತನಗೆ ಹುದ್ದೆ ಮುಖ್ಯವಲ್ಲ ಎಂಬುದಾಗಿ ಹೇಳಿದ್ದರು. ತಾನು ಎಲ್ಲಿಗೂ ಹೋಗುವುದಿಲ್ಲ ಎಂದು ಗೆಹ್ಲೋಟ್ ರಾಜಸ್ಥಾನದ ಶಾಸಕರಿಗೆ ಭರವಸೆ ನೀಡಿದ್ದರು.

ಕಳೆದ 22 ವರ್ಷಗಳಲ್ಲಿ ಮೊದಲ ಅಧ್ಯಕ್ಷೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಇಬ್ಬರು ಗಾಂಧಿಯೇತರ ಅಭ್ಯರ್ಥಿಗಳಾದ ಪಕ್ಷದ ಸಂಸದ ಶಶಿ ತರೂರ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವೆ ಮುಖಾಮುಖಿಯಾಗುವ ನಿರೀಕ್ಷೆಯಿದೆ. ಎರಡು ದಿನಗಳ ಹಿಂದೆ, ಸೋನಿಯಾ ಗಾಂಧಿಯವರು ತರೂರ್ ಅವರ ಉಮೇದುವಾರಿಕೆಗೆ ಹಸಿರು ನಿಶಾನೆ ತೋರಿಸಿದ್ದರು, ಗಾಂಧಿ ಕುಟುಂಬವು ಸ್ಪರ್ಧೆಯಲ್ಲಿ ಸಂಪೂರ್ಣವಾಗಿ ತಟಸ್ಥವಾಗಿರುತ್ತದೆ ಎಂದು ವರದಿಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!