ಹೊಸ ದಿಗಂತ ವರದಿ, ವಿಜಯಪುರ:
ಇಲ್ಲಿನ ಸೊಲ್ಲಾಪುರ ರಸ್ತೆ ಬಳಿಯ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಕಚೇರಿಯಲ್ಲಿನ ದಾಖಲಾತಿ ಪರಿಶೀಲಿಸುತ್ತಿದ್ದಾರೆ.
ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣವರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿನ ದಲ್ಲಾಳಿಗಳ ಹಾವಳಿಯ ದೂರುಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಗೈದು ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಿದರು.