March 11, 2026
Wednesday, March 11, 2026
spot_img

ಮಹಿಷಾಸುರ ಪಾತ್ರದಲ್ಲಿ ಅಬ್ಬರಿಸಿ ಜೀವನ ಯಾತ್ರೆ ಮುಗಿಸಿದ ಮಂದಾರ್ತಿ ಮೇಳದ ಹಿರಿಯ ಕಲಾವಿದ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿಯ ಜನಮನ ಗೆದ್ದ ಯಕ್ಷಗಾನ ರಂಗಭೂಮಿಗೆ ದೊಡ್ಡ ಆಘಾತ ಎದುರಾಗಿದೆ. ಮಂದಾರ್ತಿ ಎರಡನೇ ಮೇಳದ ಹಿರಿಯ ಕಲಾವಿದ ಈಶ್ವರ ಗೌಡ ಅವರು ಪ್ರಸಂಗ ಮುಗಿಸಿದ ಕೆಲವೇ ಕ್ಷಣಗಳಲ್ಲಿ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಹಿಷಾಸುರ ಪಾತ್ರದಲ್ಲಿ ಅದ್ಭುತ ನಟನೆ ನೀಡಿದ ಬಳಿಕ, ವೇಷ ಕಳಚುತ್ತಿದ್ದಾಗಲೇ ಅವರು ಅಸ್ವಸ್ಥರಾದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿಯಲ್ಲೇ ಅವರು ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !