ಪಿಎಫ್​​ಐ ಬ್ಯಾನ್​ ‘ಸೆಪ್ಟೆಂಬರ್​ ಕ್ರಾಂತಿ’ ಎಂದು ಬಣ್ಣಿಸಿದ ಅಲೋಕ್ ಕುಮಾರ್​!

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಪಿಎಫ್​ಐ ಸಂಘಟನೆಯ ಮೇಲೆ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧ ಹೇರಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಸೆಪ್ಟೆಂಬರ್ ಕ್ರಾಂತಿ ಎಂದು ಬಣ್ಣಿಸಿದ್ದಾರೆ.

ಪಿಎಫ್​ಐ ನಿಷೇಧ ಕುರಿತು ಟ್ವೀಟ್ ಮಾಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್​ ಅವರು, ಭಗವಾನ್ ಕೃಷ್ಣನ ಮಾತನ್ನೂ ಉಲ್ಲೇಖಿಸಿದ್ದಾರೆ. ‘ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ’ (ಸಜ್ಜನರನ್ನು ರಕ್ಷಿಸಿ, ದುರ್ಜನರನ್ನು ಶಿಕ್ಷಿಸಲು) ಎಂಬ ಕೃಷ್ಣನ ಮಾತನ್ನು ಉಲ್ಲೇಖಿಸಿರುವ ಅವರು ಸರ್ಕಾರ ಕೂಡ ಅದನ್ನೇ ಮಾಡಿದೆ ಎಂಬುದನ್ನು ಹೇಳಿದ್ದಾರೆ.

ಜೊತೆಗೆ ಪಿಎಫ್​ಐ ನಿಷೇಧವನ್ನು ಅವರು ಸೆಪ್ಟೆಂಬರ್ ಕ್ರಾಂತಿ ಎಂಬುದಾಗಿ ಬಣ್ಣಿಸಿದ್ದಾರೆ. ಏಕೆಂದರೆ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದ ಸಿಮಿ ಸಂಘಟನೆಯನ್ನೂ 2001ರ ಸೆ. 26ರಂದು ನಿಷೇಧಿಸಲಾಗಿತ್ತು. ಇದೀಗ ಪಿಎಫ್​ಐಯನ್ನು ಕೂಡ ಸೆಪ್ಟೆಂಬರ್​ನಲ್ಲೇ ನಿಷೇಧಿಸಲಾಗಿದೆ ಎಂಬುದನ್ನು ತಾರೀಕು ಸಹಿತ ಉಲ್ಲೇಖಿಸಿರುವ ಅವರು ಇದು ಸೆಪ್ಟೆಂಬರ್ ಕ್ರಾಂತಿ ಎಂಬುದಾಗಿ ಹೇಳಿದ್ದಾರೆ.
ಅಲ್ಲದೆ ಜನಹಿತದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಮತ್ತು ನಾವು ಕೇವಲ ಕಾನೂನುಬಾಹಿರ ಚಟುವಟಿಕೆಗಳಿಗಷ್ಟೇ ವಿರುದ್ಧ ಎಂಬುದಾಗಿ ಹೇಳಿಕೊಂಡಿದ್ದಾರೆ.

ಪಿಎಫ್​ಐ ಬ್ಯಾನ್ ಕುರಿತು ಅಲೋಕ್​ಕುಮಾರ್ ಅವರ ಈ ಪ್ರತಿಕ್ರಿಯೆ ಜನರಿಂದ ಬಹಳ ಮೆಚ್ಚುಗೆಗೆ ಪಾತ್ರವಾಗುತ್ತಿದ್ದು, ಈ ಟ್ವೀಟ್ ವೈರಲ್ ಆಗಲಾರಂಭಿಸಿದೆ.ಪ್ರಶಂಶೆ ವ್ಯಕ್ತಪಡಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!