ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀವಾರಿ ಬ್ರಹ್ಮೋತ್ಸವಕ್ಕೆ ತಿರುಮಲ ಸಜ್ಜಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿ ಸಾಲಕಟ್ಲ ಬ್ರಹ್ಮೋತ್ಸವದ ಧ್ವಜಾರೋಹಣದ ಹಿಂದಿನ ದಿನ ಅಂಕುರಾರ್ಪಣ ನಡೆಯಿತು. ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ಟಿಟಿಡಿ ತಿರುಮಲದ ʻಸಪ್ತಗಿರಿʼಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ವಿದ್ಯುದ್ದೀಪಗಳ ಅಲಂಕಾರದಿಂದ ಬೆಟ್ಟಗಳು ಝಗಮಗಿಸುತ್ತಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಪ್ರಮುಖ ರಸ್ತೆಗಳನ್ನು ವಿವಿಧ ರೀತಿಯ ಹೂವಿನ ಗಿಡಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಅಲ್ಲಿನ ಸೌಂದರ್ಯ ನಿಮಗಾಗಿ.